rtgh

ರೈತರಿಗೆ ಬಂಪರ್‌ ಸುದ್ದಿ.!! ಇವರಿಗೆ ಸರ್ಕಾರಿ ಭೂಮಿ ಮಂಜೂರು; ನೀವು ಇಂದೇ ಚೆಕ್‌ ಮಾಡಿ

ಹಲೋ ಸ್ನೇಹಿತರೇ, ನಮ್ಮ ರಾಜ್ಯದ ಕರಾವಳಿ ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರದೇಶ ಕಾಡಿನಿಂದ ಆವೃತವಾಗಿದೆ. ಇಲ್ಲಿ ತಲತಲಾಂತರದಿಂದ ಜನರು ತಮ್ಮ ಜೀವನ ನಡೆಸುವ ಸಲುವಾಗಿ ಅರಣ್ಯ ಒತ್ತುವರಿ ಮಾಡಿಕೊಂಡು ತೋಟಗಳಾಗಿ ಪರಿವರ್ತಿಸಿ ಅಡಿಕೆ, ತೆಂಗು, ಬಾಳೆ, ಕಾಳುಮೆಣಸು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದು ಜೀವನ ಕಟ್ಟಿಕೊಂಡಿದ್ದಾರೆ.

government land allotment karnataka

ಇಷ್ಟಾದರೂ ಜಮೀನು ಅತಿಕ್ರಮಣ ಆಗಿರುವುದರಿಂದ ಅವರ ಹೆಸರಿನಲ್ಲಿ ಇಲ್ಲ. ಹಾಗಾಗಿ ಅತಿಕ್ರಮಣ ಮಾಡಿದ ಜಮೀನನ್ನು ತಮ್ಮ ಹೆಸರಿಗೆ ಮಾಡಿಕೊಡಿ ಎಂದು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ಈ ಹೋರಾಟಕ್ಕೆ ಫಲ ಸಿಗುವ ಸಮಯ ಬಂದಿದ್ದು, ಇದೇ ತಿಂಗಳು ಏಳು ಸಾವಿರ ಜನರಿಗೆ ಜಮೀನಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರು ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಆದರೆ ಎಲ್ಲರಿಗೂ ಜಮೀನಿನ ಹಕ್ಕುಪತ್ರ ಸಿಗುವುದಿಲ್ಲ. ಸರ್ಕಾರವು ರೂಪಿಸಿರುವ ನಿಯಮಗಳನುಸಾರವಾಗಿ ಇರುವವರಿಗೆ ಮಾತ್ರವೇ ಹಕ್ಕುಪತ್ರ ಸಿಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಆದರೆ ಕೆಲವೊಬ್ಬರು ತಮ್ಮ ಪ್ರಭಾವ ಬಳಸಿ ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ಈಗ ಅಂತಹದೇ ಅತಿಕ್ರಮಣ ತೆರವು ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರು ಸಮೀಪದ ಕೊತ್ತುರು ಪ್ರದೇಶದಲ್ಲಿ ಒತ್ತುವರಿಯಾಗಿದ್ದ 4೦೦ ಎಕರೆ ಅರಣ್ಯ ಪ್ರದೇಶವನ್ನು ಸರಂಕ್ಷಣೆ ಮಾಡಲಾಗಿದೆ. ಪ್ರಭಾವಿಗಳು ತಮ್ಮ ಪ್ರಭಾವ ಬಳಸಿ ಈ ಪ್ರದೇಶವನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿದ್ದರು ಎಂದು ಸ್ವತಃ ಸಚಿವರೇ ವಿವರಿಸಿದ್ದಾರೆ.


ಗೃಹಲಕ್ಷ್ಮಿ ಸಮಸ್ಯೆಗೆ ಇಲ್ಲಿದೆ ಪರಿಹಾರ! ಗ್ರಾಮ ಒನ್ ನಲ್ಲಿ ಹೊಸ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ

ಈಗ ಈ ರೀತಿಯ ಅಕ್ರಮ ಮಾಡಲು ಸಹಕಾರ ನೀಡಿದ ತಹಶೀಲ್ದಾರ್ ಮತ್ತು ಉಪತಹಶೀಲ್ದಾರ್ಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಆದರೆ ಅನೇಕ ರೈತರು ಕೃಷಿ ಉದ್ದೇಶಕ್ಕೆ ಮಾತ್ರ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅಂತಹವರಿಗೆ ಹಕ್ಕುಪತ್ರ ನೀಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

ಅಕ್ರಮ-ಸಕ್ರಮ ಅಡಿಯಲ್ಲಿ ಈಗಾಗಲೇ ಲಕ್ಷಾಂತರ ಜನರು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಈಗಾಗಲೇ ಸಾಕಷ್ಟು ಜಮೀನು ಇದ್ದವರು, ಕೃಷಿಯೇತರ ಚಟುವಟಿಕೆಗೆ ಬಳಸುವ ಉದ್ದೇಶದಿಂದ ಒತ್ತುವರಿ ಮಾಡಿದವರು ಸೇರಿದ್ದಾರೆ.

ಹಾಗಾಗಿ ಎಲ್ಲಾ ಅರ್ಜಿಗಳನ್ನು ಕುಲಂಕುಷವಾಗಿ ಪರಿಶೀಲನೆ ನಡೆಸಲು ಸಚಿವರುಗಳು ಅಧಿಕಾರಿಗಳಿಗೆ ಆದೇಶವನ್ನು ನೀಡಿದ್ದಾರೆ. ಯಾರು ಕೃಷಿ ಉದ್ದೇಶಕ್ಕಾಗಿ ಮಾತ್ರ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಅದರಲ್ಲೂ ಕಳೆದಂತಹ ಮೂರು ತಲೆಮಾರುಗಳಿಂದ ಅದೇ ಜಮೀನನ್ನು ಬಳಕೆ ಮಾಡುತ್ತಿದ್ದಾರೆ ಅಂತಹವರಿಗೆ ಮಾತ್ರವೇ ಹಕ್ಕುಪತ್ರ ನೀಡಲಾಗುತ್ತಿದೆ.

1980ರ ಅರಣ್ಯ ರಕ್ಷಣಾ ಕಾಯ್ದೆಯು ಬಹಳ ಕಟ್ಟುನಿಟ್ಟಾಗಿದ್ದು, ಇದರ ಅಡಿಯಲ್ಲಿ ಐದು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಇದರ ಅನ್ವಯ ಒತ್ತುವರಿ ಮಾಡಿಕೊಂಡ ಜಮೀನನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ.

ಅಂತ್ಯೋದಯ ಕಾರ್ಡ್ ಇದ್ದವರಿಗೆ ಭರ್ಜರಿ ಆಫರ್! 2028 ರವರೆಗೆ ಸಿಲಿದೆ ಉಚಿತ ರೇಷನ್‌

ಕಾರ್ಮಿಕ ಕಾರ್ಡ್ ಇದ್ದವರಿಗೆ ಬಂಪರ್! ಕೇಂದ್ರ ಸರ್ಕಾರದಿಂದ ಈ ತಿಂಗಳ ಹಣ ಖಾತೆಗೆ

Leave a Comment